-->
ಮಕ್ಕಳ ಜಗಲಿ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ - 2022

ಮಕ್ಕಳ ಜಗಲಿ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ - 2022

ಮಕ್ಕಳ ಜಗಲಿ ಆಯೋಜಿಸುವ ಎರಡನೆಯ
ರಾಜ್ಯ ಮಟ್ಟದ
ಚಿತ್ರಕಲಾ ಸ್ಪರ್ಧೆ

ಮಕ್ಕಳ ಜಗಲಿ ಕಲಾ ಪ್ರಶಸ್ತಿ - 2022
◾ಕಲಾಕೃತಿ ಅಂಚೆ ಮೂಲಕ ಕಳುಹಿಸಲು ಕೊನೆಯ ದಿನಾಂಕ : ಡಿಸೆಂಬರ್ 24, 2022

◾ಫಲಿತಾಂಶ ಪ್ರಕಟ : ಜನವರಿ 5, 2023

◾ಪ್ರತಿ ವಿಭಾಗದಲ್ಲೂ ಸಮಾನ 3 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಅತ್ಯುತ್ತಮ 20 ಕಲಾಕೃತಿಗಳಿಗೆ ಮೆಚ್ಚುಗೆ ಪ್ರಶಸ್ತಿ ಪತ್ರಗಳು.

◾ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಪ್ರಮಾಣ ಪತ್ರ ನೀಡಲಾಗುವುದು.

◾30 ಸೆಂ.ಮೀ X 22 ಸೆಂ.ಮೀ. (A4) ಅಳತೆಯ ಡ್ರಾಯಿಂಗ್ ಹಾಳೆಯಲ್ಲಿ ನಿಮಗೆ ತಿಳಿಸಿದ ಮಾಧ್ಯಮಗಳಲ್ಲಿ ಚಿತ್ರ ರಚಿಸಿ ಅಂಚೆ ಮೂಲಕ ಕಳುಹಿಸಿಕೊಡುವುದು.

◾ಕಲಾಕೃತಿಯ ಹಿಂಭಾಗದಲ್ಲಿ,
▪️ವಿದ್ಯಾರ್ಥಿಯ ಹೆಸರು :
▪️ಜನನ ದಿನಾಂಕ :
▪️ತರಗತಿ :
▪️ ಶಾಲಾ ಹೆಸರು :
▪️ ತಾಲೂಕು :
▪️ ಜಿಲ್ಲೆ :
▪️ ವಾಟ್ಸಾಪ್ ನಂ :

 ಈ ರೀತಿ ಮಾಹಿತಿ ಬರೆಯಬೇಕು.

◾ಹೊರರಾಜ್ಯದಲ್ಲಿ ಕಲಿಯುತ್ತಿರುವ ಕರ್ನಾಟಕದ ಮೂಲ ನಿವಾಸಿಗಳಿಗೆ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ.
◾ಕಲಾಕೃತಿಯನ್ನು ವಿದ್ಯಾರ್ಥಿಯೇ ರಚಿಸಿದ್ದಾರೆಂದು ದೃಢೀಕರಿಸಿ ಶಾಲಾ ಮುಖ್ಯಸ್ಥರು ಕಲಾಕೃತಿಯ ಹಿಂಭಾಗದಲ್ಲಿ ಸಹಿ ಮಾಡಿರಬೇಕು.

◾ಕಲಾಕೃತಿಗಳನ್ನು ಅಂಚೆ ಮೂಲಕ ಕಳುಹಿಸಿಕೊಡಬೇಕಾದ ವಿಳಾಸ :

◾ತಾರಾನಾಥ್ ಕೈರಂಗಳ್ 
ಮಕ್ಕಳ ಜಗಲಿ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ಸರಕಾರಿ ಪ್ರೌಢಶಾಲೆ, ಮಂಚಿ ಕೊಳ್ಳಾಡು 
ಮಂಚಿ ಅಂಚೆ, ಕೊಳ್ಳಾಡು ಗ್ರಾಮ 
ಬಂಟ್ವಾಳ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ 
ಪಿನ್ ಕೋಡ್ : 574 323
ಮೊಬೈಲ್ : 9844820979

◾ತೀರ್ಪುಗಾರರ ತೀರ್ಮಾನ ಅಂತಿಮ, 

◾ ಆಯ್ದ ಅತ್ಯುತ್ತಮ ಕಲಾಕೃತಿಗಳನ್ನು ಮಕ್ಕಳ ಜಗಲಿಯಲ್ಲಿ ಪ್ರಕಟಿಸಲಾಗುವುದು ಹಾಗೂ ಕಲಾಕೃತಿಗಳನ್ನು ಹಿಂತಿರುಗಿಸಲಾಗುವುದಿಲ್ಲ.

◾ಹೆಚ್ಚಿನ ಮಾಹಿತಿಗಳಿಗೆ ವಿಚಾರಿಸಿ :

◾ಪೆರ್ಮುದೆ ಮೋಹನ್‌ ಕುಮಾರ್
MOB : 9448539003

◾ತುಳಸಿ ಕೈರಂಗಳ್
MOB : 9480288214

◾ಪ್ರಸನ್ನ ಐವರ್ನಾಡು
MOB : 9449331609
 
◾ಝುಬೈರ್ ಖಾನ್ ಕುಡ್ಲ
MOB : 6363417394

◾ಭಾಸ್ಕರ್ ನೆಲ್ಯಾಡಿ
MOB : 9901114843

◾ಅನಿಲ್‌ ಕುಮಾರ್ ಎಚ್‌. ಪಿ.
MOB : 9964912411

◾ಪ್ರಕಾಶ್ ವಿಟ್ಲ
MOB : 9901325219

◾ಬಾಲಕೃಷ್ಣ ಶೆಟ್ಟಿ
MOB : 9902196309

ಸಹಕಾರ : ಮಕ್ಕಳ ಜಗಲಿ ಬಳಗ ಮತ್ತು ದ. ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ


ಇದು ನಿಮ್ಮ ಮನೆಯ
ಮಕ್ಕಳ ಜಗಲಿ
www.makkalajagali.com

      ಕೊರೋನ ಸಮಯದ ಸಂಧಿಗ್ಧತೆಯು ನಮಗೆ ಅನೇಕ ಪಾಠಗಳನ್ನು ಕಲಿಸಿದೆ. ನಮ್ಮ ನಿತ್ಯದ ಚಟುವಟಿಕೆಗಳಲ್ಲಿ ಅನೇಕ ಬದಲಾವಣೆಗಳಾಗಿವೆ. ಒಟ್ಟಾಗಿ ಹೇಳುವುದಾದರೆ ಹೊಸತೊಂದು ಹುಡುಕಲು ಅಥವಾ ಪರ್ಯಾಯವಾಗಿ ಶೋಧಿಸಲು ಕಾರಣವಾಗಿದೆ.
            ಮಕ್ಕಳ ಶೈಕ್ಷಣಿಕ ವ್ಯವಸ್ಥೆಯಲ್ಲಿ ಏರು ಪೇರುಗಳಾಗಿ ಡಿಜಿಟಲ್ ಪದ್ಧತಿ ಸಾಧಕ ಬಾಧಕಗಳ ನಡುವೆಯೇ ಪಾಠ ಬೋಧನೆಗಳನ್ನು ನಡೆಸಬೇಕಾದ ಅನಿವಾರ್ಯತೆ ಎದುರಾದಂತಹ ಸಂದರ್ಭದಲ್ಲಿ ಮಕ್ಕಳು ನಿತ್ಯ ಕಲಿಕಾ ಚಟುವಟಿಕೆಯಿಂದ ಇರಬೇಕಾದುದನ್ನು ಮನಗಂಡು ಕಂಡುಕೊಂಡ ಫಲವೇ ಮಕ್ಕಳ ಜಗಲಿ.
         ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢ ಶಾಲೆ ಮಂಚಿ ಕೊಳ್ನಾಡು, ಈ ಗ್ರಾಮೀಣ ಭಾಗದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳನ್ನು ಕ್ರಿಯಾಶೀಲರನ್ನಾಗಿಸುವ ಯೋಜನೆಯನ್ನು ರೂಪಿಸಲಾಯಿತು. ವಿವಿಧ ಸ್ಪರ್ಧೆಗಳ ಮೂಲಕ ಹಾಗೂ ವೀಕೆಂಡ್ ಟಾಸ್ಕ್ ಅನ್ನುವ ವೈವಿಧ್ಯ ಚಟುವಟಿಕೆಯ ಮೂಲಕ ಮಕ್ಕಳು ನಿರಂತರವಾಗಿ ಭಾಗವಹಿಸುವುದನ್ನು ಗಮನಿಸಿಕೊಳ್ಳಲಾಯಿತು. ಮಕ್ಕಳ ಆಸಕ್ತಿ ಕುತೂಹಲಗಳನ್ನು ಗಮನಿಸಿ ಒಂದು ಹೆಜ್ಜೆ ಮುಂದುವರಿದಂತೆ ಮಕ್ಕಳ ಪತ್ರಿಕೆಯನ್ನು ನಡೆಸುವ ಚಿಂತನೆ ಆರಂಭವಾಯಿತು. ಮಕ್ಕಳ ಸೃಜನಶೀಲ ಅಭಿವ್ಯಕ್ತಿಗಳಿಗೆ ಪೂರಕವಾಗುವಂತೆ ಮಕ್ಕಳ ಜಗಲಿ ಪತ್ರಿಕೆಯನ್ನು ಆರಂಭಿಸುವ ಎಲ್ಲಾ ನಿರ್ಧಾರಗಳು ಸರಿಯಾದ ದಿಕ್ಕಿನಲ್ಲೇ ಸಾಗಿತು.
      ಮಕ್ಕಳ ಜಗಲಿ ಇದು ಮಕ್ಕಳಿಗಾಗಿ ಮೀಸಲಾದ ಇ-ಪತ್ರಿಕೆ. ಮಕ್ಕಳ ಮನಸ್ಸಿನ ಭಾವನೆಗಳನ್ನು ವೈವಿಧ್ಯ ಪ್ರಾಕಾರಗಳಲ್ಲಿ ಪ್ರಕಟ ಪಡಿಸಲು ಇರುವಂತಹ ವೇದಿಕೆ. ಮಕ್ಕಳ ಸ್ವರಚಿತ ಕಥೆ, ಲೇಖನ, ಕವನ, ಆರ್ಟ್ ಮತ್ತು ಕ್ರಾಪ್ಟ್ ಹೀಗೆ ಹಲವಾರು ಮಕ್ಕಳ ಸೃಜನಾತ್ಮಕ ಸಾಹಿತ್ಯ ಮತ್ತು ಕಲಾ ಚಟುವಟಿಕೆಗಳಿಗೆ ಪ್ರೇರಣೆ ನೀಡಲು ಸಹಕಾರಿಯಾಗಬಲ್ಲುದು. 
      ಹಳೆ ಶೈಲಿ ಮನೆಗಳಲ್ಲಿ ಹೆಚ್ಚಾಗಿ ಮನೆ ಮುಂದೆ ಜಗಲಿ ಇರುತ್ತಿತ್ತು. ಮನೆಮಕ್ಕಳೆಲ್ಲಾ ಜಗಲಿ ಮೇಲೆ ಕುಳಿತು ಬರೆಯುವುದು, ಓದುವುದು, ಹಾಡುವುದು, ರಂಗೋಲಿ ಬಿಡಿಸುವುದು, ಕಲ್ಲಾಟವಾಡುವುದು ಹೀಗೆ ಹಲವು ಚಟುವಟಿಕೆಗಳಿಗೆ ಅದುವೇ ವೇದಿಕೆ. ನನ್ನಂತಹ ಅನೇಕರಿಗೆ ಜೀವನದ ಹಲವು ಮೈಲುಗಲ್ಲುಗಳನ್ನು ಯಶಸ್ವಿಯಾಗಿ ದಾಟಲು ಮನೆ ಜಗಲಿ ಪ್ರೇರಣೆ ನೀಡಿದೆ. ಜಗಲಿ ಮಾಯವಾಗಬಾರದು, ಅದನ್ನು ಮತ್ತೆ ಕಟ್ಟಬೇಕೆಂದು ಕನಸು.
      ಮಂಚಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಶೀಲ ವಿಟ್ಲ, ವಿಜ್ಞಾನ ಶಿಕ್ಷಕರಾದ ಶ್ರೀ ವಿ. ಶ್ರೀರಾಮಮೂರ್ತಿ, ಸಹೋದ್ಯೋಗಿ ಬಂಧುಗಳು, ಶಾಲಾ ಎಸ್.ಡಿ.ಎಂ.ಸಿ, ಶಾಲಾ ಮಕ್ಕಳು, ಜಗಲಿಯ ಕನಸಿಗೆ ಸಾಕ್ಷಿಗಳು. ಸೃಜನಶೀಲ ಚಿಂತನೆಗಳಿಗೆ ರೂಪ ಕೊಟ್ಟಂತಹ ಶಿಕ್ಷಣ ಚಿಂತಕ ಗೋಪಾಡ್ಕರ್, ಸ್ಪೂರ್ತಿಯಾಗಿರುವ ರಂಗ ನಿರ್ದೇಶಕ ಜೀವನ್ ರಾಮ್ ಸುಳ್ಯ, ಪ್ರೇರಣೆಯನ್ನು ನೀಡುತ್ತಾ ಬಂದಿರುವ ಕಲಾವಿದ, ಸಾಹಿತಿ ದಿನೇಶ ಹೊಳ್ಳ, ತಾಂತ್ರಿಕ ಸಹಕಾರ ನೀಡುತ್ತಿರುವ ಪತ್ರಕರ್ತ ಮಿತ್ರರಾದ ವಿನೋದ್ ಪುದು, ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರಾದ ಶ್ರೀ ಮಲ್ಲೇಸ್ವಾಮಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶ್ರೀ ಜ್ಞಾನೇಶ್, ಮಾರ್ಗದರ್ಶಕರಾದ ಶ್ರೀ ವೈ ಶಿವರಾಮಯ್ಯ, ಶಿವಪ್ರಕಾಶ ಎನ್, ಮಕ್ಕಳ ಜಗಲಿಯಲ್ಲಿ ಬರೆಯುತ್ತಿರುವ ಎಲ್ಲಾ ಅಂಕಣಕಾರರು ಹಾಗೂ ನಿರಂತರವಾಗಿ ಪಾಲ್ಗೊಳ್ಳುವ ಮಕ್ಕಳು, ಓದುಗರು ಇವರೆಲ್ಲ ಕನಸಿನ ಜಗಲಿಯ ಪಾಲುದಾರರು. 
             ಮಕ್ಕಳ ಜಗಲಿಯನ್ನು ಎಲ್ಲರ ಮನ ಮನೆಗಳಿಗೆ ತಲುಪಿಸಬೇಕೆಂದು ನಮ್ಮ ಗುರಿಯಾಗಿದೆ. ಈ ಸಂದರ್ಭದಲ್ಲಿ ಶೀರ್ಷಿಕೆ ಗೀತೆಯನ್ನು ನಿರ್ಮಿಸಿ ಪ್ರಸಾರ ಮಾಡುವ ಆಲೋಚನೆ ಮೂಡಿತು. ಸಾಹಿತಿ ಚಂದ್ರಶೇಖರ ಪಾತೂರು ಬರೆದ ಸಾಹಿತ್ಯಕ್ಕೆ ಮಂಗಳೂರಿನ ಕೋಣಾಜೆ ವಿಶ್ವ ಮಂಗಳ ಪ್ರೌಢ ಶಾಲೆಯ ೯ನೇ ತರಗತಿ ವಿದ್ಯಾರ್ಥಿನಿ ಶ್ರೀರಕ್ಷಾ ಎಸ್ ಎಚ್ ಪೂಜಾರಿ ಅದ್ಭುತವಾಗಿ ಹಾಡಿದಳು. ಪುತ್ತೂರಿನ ಮಕ್ಕಳ ಮಂಟಪದ ಅನೇಕ ಪುಟಾಣಿಗಳು ಈ ದೃಶ್ಯ ಸಂಯೋಜನೆಯಲ್ಲಿ ಹಾಡಿ ನಲಿದರು. ಮಕ್ಕಳ ಜಗಲಿಯ ಹಾಡು ಎಲ್ಲರನ್ನು ತಲುಪುವ ಮೂಲಕ ಜಗಲಿಗೆ ಬರೆಯುವ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿತು.
        ಮಕ್ಕಳ ಜಗಲಿ ಅದು ನಿಮ್ಮ ಮನೆಯ ಮಕ್ಕಳ ಜಗಲಿ. ಇಲ್ಲಿ ಸಣ್ಣ ಮಕ್ಕಳಿಂದ ಪಿ.ಯು.ಸಿವರೇಗೆ ಕಲಿಯುತ್ತಿರುವ ಮಕ್ಕಳಿಗೆ ಅವಕಾಶ ನೀಡುತ್ತಿದ್ದೇವೆ. ಎಲ್ಲಾ ಮನೆಯ ಮಕ್ಕಳೂ ಶ್ರೇಷ್ಠರೇ. ಅವರಿಗೆ ಅವಕಾಶ ಕೊಡಬೇಕಾಧದ್ದು ಹಿರಿಯರಾದ ನಮ್ಮ ಕರ್ತವ್ಯ. ಆ ಮೂಲಕ ಪ್ರತಿಯೊಂದು ಮನೆಯ ಮಕ್ಕಳನ್ನು ಜಗಲಿಯಲ್ಲಿ ಸ್ವತಂತ್ರವಾಗಿ ಬೆಳೆಯಲು ಬಿಡಿ ಎಂದು ನಮ್ಮ ಬೇಡಿಕೆ.
            2020ನೇಯ ನವೆಂಬರ್ 14ರ ಮಕ್ಕಳದಿನಾಚರಣೆಯಂದು ಉದ್ಘಾಟನೆಗೊಂಡು ಮಕ್ಕಳ ಪ್ರತಿಭಾ ವೇದಿಕೆಯಾಗಿ ಗುರುತಿಸಿಕೊಂಡಿತು. ದ.ಕ. ಜಿಲ್ಲೆಗೆ ಮಾತ್ರ ಮೀಸಲಿದ್ದ ಈ ವೇದಿಕೆ ಈಗ ವಿಸ್ತಾರಗೊಂಡು ರಾಜ್ಯದ ವಿವಿಧ ಜಿಲ್ಲೆಗಳಿಗೂ ವ್ಯಾಪಿಸಿದೆ. ಹೊರ ರಾಷ್ಟದಲ್ಲಿ ವಾಸವಿರುವ ಭಾರತೀಯ ವಿದ್ಯಾರ್ಥಿಗಳೂ ಮಕ್ಕಳ ಜಗಲಿಗೆ ಬೆರೆಯುತ್ತಿದ್ದಾರೆ. ಇದೊಂದು ಒಳ್ಳೆಯ ಬೆಳವಣಿಗೆ. ಪ್ರತಿಭಾನ್ವಿತ ಮಕ್ಕಳು ಬೆಳೆಯಬೇಕೆಂದು ನಮ್ಮ ಉದ್ದೇಶ. ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂದು ಪ್ರೋತ್ಸಾಹದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಮಕ್ಕಳ ಜಗಲಿ ಸದಾ ಸಿದ್ದವಾಗಿದೆ.
◾◾ತಾರಾನಾಥ್   ಕೈರಂಗಳ...........
ಮಕ್ಕಳ ಜಗಲಿ 
ದಕ್ಷಿಣ ಕನ್ನಡ ಜಿಲ್ಲೆ

.


Ads on article

Advertise in articles 1

advertising articles 2

Advertise under the article